Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:8 - ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:8
23 ತಿಳಿವುಗಳ ಹೋಲಿಕೆ  

ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.


ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು