Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:10 - ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:10
24 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.


ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.


“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಬಳಿಕ ನೀವು ಪಾಳೆಯದೊಳಗೆ ಬರಬಹುದು.”


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


“ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು.


ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.


ಅವುಗಳನ್ನು, ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು