Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ, ನೀವು ಲೈಂಗಿಕ ಸಂಬಂಧದಿಂದ ದೂರವಾಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:15
16 ತಿಳಿವುಗಳ ಹೋಲಿಕೆ  

ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.


ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ಮೂರನೆಯ ರಥಕ್ಕೆ ಬಿಳೀ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.


ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ಅಂತೆಯೇ ಮೋಶೆ ಬೆಟ್ಟದಿಂದ ಇಳಿದು ಬಂದು ಜನರನ್ನು ಪರಿಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು