Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:6 - ಕನ್ನಡ ಸತ್ಯವೇದವು C.L. Bible (BSI)

6 ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:6
37 ತಿಳಿವುಗಳ ಹೋಲಿಕೆ  

ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಈ ಪತ್ರವನ್ನು ಎಲ್ಲ ಸಹೋದರರಿಗೂ ಓದಿಹೇಳಬೇಕೆಂದು ಪ್ರಭುವಿನ ಹೆಸರಿನಲ್ಲಿ ವಿಧಿಸುತ್ತಿದ್ದೇನೆ.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.


ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.


ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ಜುದೇಯ ಆಯಿತಾತನಿಗೆ ದೇವಾಲಯ I ಇಸ್ರಯೇಲ್ ಆಯಿತಾತನಿಗೆ ಸ್ವರಾಜ್ಯ II


ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು