Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:11 - ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ದೊಡ್ಡವನಾದ ಮೇಲೆ ಸ್ವಜನರ ಬಳಿಗೆ ಹೋಗಿ ಇವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಒಂದು ದಿವಸ ಅವನು ತನ್ನ ಜನರಾದ ಇಬ್ರಿಯರೊಳಗೆ ಒಬ್ಬನನ್ನು ಐಗುಪ್ತ್ಯನೊಬ್ಬನು ಹೊಡೆಯುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:11
13 ತಿಳಿವುಗಳ ಹೋಲಿಕೆ  

ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


“ನೀವು ಇಟ್ಟಿಗೆಗಳ ಲೆಕ್ಕವನ್ನು ಹಿಂದೆ ಒಪ್ಪಿಸುತ್ತಿದ್ದಂತೆ ನಿನ್ನೆ ಮತ್ತು ಇಂದು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಫರೋಹನ ಅಧಿಕಾರಿಗಳು ತಾವೇ ನೇಮಿಸಿದ್ದ ಇಸ್ರಯೇಲ್ ಮೇಸ್ತ್ರಿಗಳನ್ನು ಹೊಡೆಸುತ್ತಿದ್ದರು.


ನೀವು ಅವರಿಂದ ಇನ್ನೂ ಕಷ್ಟಕರವಾದ ಕೆಲಸ ಮಾಡಿಸಬೇಕು. ಕೆಲಸ ಹೆಚ್ಚಾದರೆ ಸುಳ್ಳುಪೊಳ್ಳು ಮಾತುಗಳಿಗೆ ಕಿವಿಗೊಡಲು ಆಸ್ಪದಯಿರುವುದಿಲ್ಲ,” ಎಂದು ಆಜ್ಞಾಪಿಸಿದನು.


ಅವರಿಗೆ ಆ ಈಜಿಪ್ಟರ ಅರಸನು, “ಎಲೈ ಮೋಶೆ - ಆರೋನರೇ, ನೀವು ಮಾಡುತ್ತಾ ಇರುವುದೇನು? ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ಮಾಡುತ್ತಿದ್ದೀರಿ. ನಡೆಯಿರಿ ಗುಲಾಮಗಿರಿಗೆ” ಎಂದುಬಿಟ್ಟನು.


ಇದೂ ಅಲ್ಲದೆ ಆ ಫರೋಹನು, “ನೋಡಿ, ನಾಡಿನಲ್ಲಿ ಈ ಜನರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ! ಇವರು ತಮ್ಮ ಕೆಲಸದಿಂದ ತಪ್ಪಿಸಿಕೊಳ್ಳುವುದಕ್ಕೆ ನೀವೇ ಕಾರಣ ಆಗುತ್ತಿದ್ದೀರಿ,” ಎಂದನು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು