Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:15 - ಕನ್ನಡ ಸತ್ಯವೇದವು C.L. Bible (BSI)

15 ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸಿದ್ದರಿಂದ ಮೋಶೆ ಫರೋಹನ ಬಳಿಯಿಂದ ಓಡಿಹೋಗಿ ವಿುದ್ಯಾನ್ ದೇಶವನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:15
17 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ಇದನ್ನು ಕೇಳಿದ್ದೇ ಮೋಶೆ ಅಲ್ಲಿಂದ ಪಲಾಯನಮಾಡಿ ಮಿದ್ಯಾನರ ನಾಡಿನಲ್ಲಿ ಆಶ್ರಯ ಪಡೆದನು. ಅಲ್ಲಿರುವಾಗ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.


ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.


ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.


ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.


ಗೇಫಾ, ಗೇಫೆರ್, ಹನೋಕ್ ಅಬೀದಾ, ಎಲ್ದಾಗ ಎಂಬವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.


ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.


ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು