Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:16 - ಕನ್ನಡ ಸತ್ಯವೇದವು C.L. Bible (BSI)

16 ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಲ್ಲಿ ಒಂದು ಬಾವಿಯ ಹತ್ತಿರ ಕೂತುಕೊಂಡಿರಲು ವಿುದ್ಯಾನ್ಯರ ಆಚಾರ್ಯನ ಏಳುಮಂದಿ ಹೆಣ್ಣುಮಕ್ಕಳು ಬಂದು ತಂದೆಯ ಕುರಿಗಳಿಗೆ ಕುಡಿಸುವದಕ್ಕೋಸ್ಕರ ನೀರು ಸೇದಿ ದೋಣಿಗಳಲ್ಲಿ ಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:16
11 ತಿಳಿವುಗಳ ಹೋಲಿಕೆ  

ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.


ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.


ಬಳಿಕ ಫರೋಹನು ಜೋಸೆಫನಿಗೆ ‘ಸಾಪ್ನತ್ಪನ್ನೇಹ’ ಎಂಬ ಹೊಸ ಹೆಸರಿಟ್ಟನು; ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ತರುವಾಯ ಜೋಸೆಫನು ಈಜಿಪ್ಟ್ ದೇಶಸಂಚಾರ ಹೊರಟನು.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.


ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.


ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು