Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:20 - ಕನ್ನಡ ಸತ್ಯವೇದವು C.L. Bible (BSI)

20 ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರ ತಂದೆ ಅವರಿಗೆ - ಆ ಮನುಷ್ಯನೆಲ್ಲಿ? ಅವನನ್ನು ಯಾಕೆ ಬಿಟ್ಟು ಬಂದಿರಿ? ಊಟ ಮಾಡುವದಕ್ಕೆ ಕರೆಯಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:20
12 ತಿಳಿವುಗಳ ಹೋಲಿಕೆ  

ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.


ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.


ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು.


ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು