Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:25 - ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್ಯರನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:25
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.


ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು