Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:11
17 ತಿಳಿವುಗಳ ಹೋಲಿಕೆ  

ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದದೆ.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು