Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:16 - ಕನ್ನಡ ಸತ್ಯವೇದವು C.L. Bible (BSI)

16 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:16
23 ತಿಳಿವುಗಳ ಹೋಲಿಕೆ  

ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


“ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.


ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.


ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


‘ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ;


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು