Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:24 - ಕನ್ನಡ ಸತ್ಯವೇದವು C.L. Bible (BSI)

24 ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:24
44 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅರಸ ರೆಹಬ್ಬಾಮನು ಜೆರುಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಪಟ್ಟಕ್ಕೆ ಬಂದದ್ದು ತನ್ನ ನಲವತ್ತೊಂದನೆಯ ವರ್ಷದಲ್ಲಿ. ಸರ್ವೇಶ್ವರ ಎಲ್ಲಾ ಕುಲಪ್ರಾಂತ್ಯಗಳಿಂದ ತಮ್ಮ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮಿನಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.


ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಲು ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾದರೆ, ಅವರು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು, ನಾನು ಅಪ್ಪಣೆಕೊಟ್ಟ ಮೇರೆಗೆ, ನೀವು ಕೊಯ್ದು ನಿಮ್ಮ ಊರಲ್ಲೇ ಊಟಮಾಡಬಹುದು.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.


ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು