Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:6 - ಕನ್ನಡ ಸತ್ಯವೇದವು C.L. Bible (BSI)

6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋ ಸಾವಿರ ತಲೆಗಳವರೆಗೆ ದಯೆ ತೋರಿಸುವವನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:6
19 ತಿಳಿವುಗಳ ಹೋಲಿಕೆ  

ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು