Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:13 - ಕನ್ನಡ ಸತ್ಯವೇದವು C.L. Bible (BSI)

13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:13
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.


ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಇಸ್ರಯೇಲರಿಗೆ


ಮನುಷ್ಯಹತ್ಯೆ ಮಾಡಿದವರು ಆಶ್ರಯಕ್ಕಾಗಿ ಓಡಿಹೋಗಲು ನೀವು ನೇಮಿಸುವ ಆರು ಆಶ್ರಯನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ, ಹೀಗೆ ನಾಲ್ವತ್ತೆಂಟು ಊರುಗಳನ್ನೂ


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು