Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:6
24 ತಿಳಿವುಗಳ ಹೋಲಿಕೆ  

ಆಗ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಆ ದಿನ ಮೊದಲ್ಗೊಂಡು ಅವನು ನಿಮಗೆ ಶಾಶ್ವತ ಗುಲಾಮನಾಗಿರುತ್ತಾನೆ. ಅದೇ ರೀತಿಯಲ್ಲಿ ಗುಲಾಮಸ್ತ್ರೀಯರ ವಿಷಯದಲ್ಲೂ ನಡೆದುಕೊಳ್ಳಬೇಕು.


ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ.


ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಅವರು, “ನೀವು ಈ ದಿನ ಜನರ ಮಾತನ್ನು ಕೇಳಿ ಅವರಿಗೆ ವಿನಯರಾಗಿ, ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


“ಜನರು ಜಗಳವಾಡುವಾಗ ಗರ್ಭಿಣಿಯಾದ ಒಬ್ಬ ಹೆಂಗಸಿಗೆ ಏಟು ತಗಲಿ ಅವಳಿಗೆ ಗರ್ಭಸ್ರಾವ ಆಗಿ, ಬೇರೆ ಯಾವ ಹಾನಿಯೂ ಆಕೆಗೆ ಆಗದೆ ಇದ್ದಲ್ಲಿ, ಆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತುಮಾಡುತ್ತಾನೋ ಅಷ್ಟನ್ನು ಹೊಡೆದವನು ಕೊಡಬೇಕು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಆದರೆ ಆ ಗುಲಾಮನು ತಾನು ತನ್ನ ಯಜಮಾನನನ್ನೂ ತನ್ನ ಮಡದಿ ಮಕ್ಕಳನ್ನೂ ಪ್ರೀತಿಸುತ್ತೇನೆ, ಈ ಕಾರಣ ಬಿಡುಗಡೆ ಹೊಂದಿ ಹೋಗಲು ಇಷ್ಟವಿಲ್ಲವೆಂದು ದೃಢವಾಗಿ ಹೇಳಬಹುದು.


“ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.


“ಒಂದು ವೇಳೆ ಅಂಥ ಗುಲಾಮನು ನಿಮ್ಮ ಬಳಿ ಸುಖವಾಗಿದ್ದು, ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆ ಆಗಿ ಹೋಗಲು ಒಲ್ಲೆನೆಂದು ಹೇಳಬಹುದು;


ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು