Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:8 - ಕನ್ನಡ ಸತ್ಯವೇದವು C.L. Bible (BSI)

8 ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:8
13 ತಿಳಿವುಗಳ ಹೋಲಿಕೆ  

ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.


ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ.


ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನು ಸೇರಿಸಿಕೊಳ್ಳದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು,’ ಎಂದು ಹೇಳಬೇಕು.


ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.


ಕಾನಾನ್ಯರ ಹೆಣ್ಣುಗಳು ತನ್ನ ತಂದೆ ಇಸಾಕನಿಗೆ ಹಿಡಿಸಲಿಲ್ಲ ಎಂಬುದನ್ನು ಅರಿತುಕೊಂಡ ಅವನು


ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.


ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.


‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.


“ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.


ಅವನು ಅವಳನ್ನು ತನ್ನ ಮಗನಿಗೆ ಗೊತ್ತುಮಾಡಿಕೊಂಡರೆ ಅವಳನ್ನು ಸೊಸೆಯಂತೆ ಭಾವಿಸಬೇಕು.


ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು