Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:11 - ಕನ್ನಡ ಸತ್ಯವೇದವು C.L. Bible (BSI)

11 ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸ ಮಾಡಲಿಲ್ಲವೆಂಬದನ್ನು ದೃಢಪಡಿಸುವದಕ್ಕೆ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಪಶುವಿನ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು; ಪ್ರಮಾಣ ಮಾಡಿದವನು ಈಡುಕೊಡಬೇಕಾದ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನೆರೆಯವನು ಆ ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲೀಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲೀಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಯೆಹೋವ ದೇವರ ಮುಂದೆ ಪ್ರಮಾಣಮಾಡಬೇಕು. ಅದನ್ನು ಪಶುವಿನ ಯಜಮಾನನು ಒಪ್ಪಿದರೆ ಅವನು ಈಡುಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:11
10 ತಿಳಿವುಗಳ ಹೋಲಿಕೆ  

ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.


“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


“ಒಬ್ಬನು ಮತ್ತೊಬ್ಬನ ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ, ಬೇರೆ ಯಾವ ಪ್ರಾಣಿಯನ್ನೇ ಆಗಲಿ ತನ್ನ ಬಳಿಯಿಂದ ಸುರಕ್ಷಿತವಾಗಿಟ್ಟುಕೊಳ್ಳಲು ಒಪ್ಪಿಕೊಂಡ ಮೇಲೆ ಅದು ಸತ್ತರೆ, ಗಾಯಗೊಂಡರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ


ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು.


ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು