Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:23 - ಕನ್ನಡ ಸತ್ಯವೇದವು C.L. Bible (BSI)

23 ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು; ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:23
19 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.


ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು