Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:28 - ಕನ್ನಡ ಸತ್ಯವೇದವು C.L. Bible (BSI)

28 “ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:28
28 ತಿಳಿವುಗಳ ಹೋಲಿಕೆ  

ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.


ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು!


ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


“ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.”


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.


ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.


ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.


ಮತ್ತು ಇಸ್ರಯೇಲರಿಗೆ ನೀನು ಹೀಗೆ ಹೇಳಬೇಕು: ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.


ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.


ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.


“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು