Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:5 - ಕನ್ನಡ ಸತ್ಯವೇದವು C.L. Bible (BSI)

5 “ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷೇತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೂ ಹೋಗಿ ಮೇಯುವಂತೆ ಮಾಡಿದರೆ ತನ್ನ ಹೊಲದ ಅಥವಾ ದ್ರಾಕ್ಷೇತೋಟದ ಉತ್ತಮಭಾಗದಲ್ಲಿ ಅವನಿಗೆ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:5
7 ತಿಳಿವುಗಳ ಹೋಲಿಕೆ  

ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.


ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು.


ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು.


ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.


“ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು