Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:11 - ಕನ್ನಡ ಸತ್ಯವೇದವು C.L. Bible (BSI)

11 “ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವದನ್ನು ತಿನ್ನಲಿ; ವಿುಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷೇತೋಟಗಳ ವಿಷಯದಲ್ಲಿಯೂ ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಅದೇ ರೀತಿಯಲ್ಲಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:11
11 ತಿಳಿವುಗಳ ಹೋಲಿಕೆ  

ಎಂಟನೆಯ ವರ್ಷದಲ್ಲಿ ಬಿತ್ತನೆ ಮಾಡಿ ಅದರ ಬೆಳೆ ದೊರೆಯುವ ತನಕ, ಅಂದರೆ ಒಂಬತ್ತನೆಯ ವರ್ಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನ ಮಾಡುವಿರಿ.


ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:


“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.


ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು