Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:12 - ಕನ್ನಡ ಸತ್ಯವೇದವು C.L. Bible (BSI)

12 ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳೂ ಕತ್ತೆಗಳೂ ದಾಸದಾಸಿಯರೂ ಪರದೇಶಸ್ಥರೂ ವಿಶ್ರವಿುಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:12
13 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.


ನೀವು ವಾಸಿಸುವ ಯಾವ ಮನೆಯಲ್ಲೇ ಆಗಲಿ, ಸಬ್ಬತ್ ದಿನದಂದು ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.


ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.


ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.


“ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ಇದಲ್ಲದೆ, ಈ ನಾಡಿನಲ್ಲಿ ವಾಸಿಸುತ್ತಿದ್ದ ಟೈರಿನವರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಜೆರುಸಲೇಮಿನಲ್ಲೇ ಮಾರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು