Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:18 - ಕನ್ನಡ ಸತ್ಯವೇದವು C.L. Bible (BSI)

18 “ನನಗೆ ಬಲಿಯನ್ನು ಅರ್ಪಿಸುವಾಗ ಆ ಬಲಿ ಪ್ರಾಣಿಯ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪ್ರಾಣಿಯ ಕೊಬ್ಬನ್ನು ಮಾರನೆಯ ದಿನದವರೆಗೂ ಇಡಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಜಾತ್ರೆಯಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ವಪೆಯನ್ನು ಮಾರಣೆ ದಿನದವರೆಗೂ ಇಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:18
10 ತಿಳಿವುಗಳ ಹೋಲಿಕೆ  

“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.


ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ಆ ಏಳು ದಿವಸವೂ ನಿಮ್ಮ ನಾಡಿನಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿ ಇರಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.


ಮರುದಿನದ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು.


ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.


ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಇದಲ್ಲದೆ ಮೋಶೆ ಅವರಿಗೆ, “ಯಾರೂ ಇದನ್ನು ಮಾರನೆ ದಿನದ ತನಕ ಇಟ್ಟುಕೊಳ್ಳಕೂಡದು,” ಎಂದು ಹೇಳಿದನು.


ಯಾಜಕಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ದೇವರ ವಸ್ತುವಾದುದರಿಂದ ಯಾರೂ ತಿನ್ನಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು