Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:25 - ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:25
26 ತಿಳಿವುಗಳ ಹೋಲಿಕೆ  

ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಜನರು ಯೆಹೋಶುವನಿಗೆ, “ಇಲ್ಲ, ನಾವು ಸರ್ವೇಶ್ವರಸ್ವಾಮಿಗೇ ಸೇವೆಸಲ್ಲಿಸುತ್ತೇವೆ,” ಎಂದರು.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಅದಕ್ಕೆ ಜನರು, “ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆಸಲ್ಲಿಸುತ್ತೇವೆ. ಅವರ ಮಾತನ್ನೇ ಕೇಳುತ್ತೇವೆ,” ಎಂದರು.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ಇಂಥವನು ತನ್ನ ಜೀವನಾವಧಿಯನ್ನು ಗಣನೆಗೆ ತಂದುಕೊಳ್ಳನು. ಕಾರಣ, ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.


ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು