Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:29 - ಕನ್ನಡ ಸತ್ಯವೇದವು C.L. Bible (BSI)

29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ಆ ನಾಡಿನಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ನಾನು ಒಂದೇ ವರುಷದೊಳಗೆ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವದಿಲ್ಲ; ಯಾಕಂದರೆ ದೇಶದಲ್ಲಿ ಜನರು ಕಡಿಮೆಯಾಗುವದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:29
7 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ನೀವು ಅಭಿವೃದ್ಧಿಯಾಗಿ ನಾಡಿನಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.


ನಾನು ನಿಮ್ಮ ಎದುರಿನಿಂದ ಅನ್ಯಜನರನ್ನು ಹೊರಡಿಸಿ ನಿಮ್ಮ ಎಲ್ಲೆಯನ್ನು ವಿಸ್ತರಿಸುವೆನು. ಅದೂ ಅಲ್ಲದೆ ನೀವು ವರ್ಷಕ್ಕೆ ಮೂರು ಸಾರಿ ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಗೆ ಬರುವಾಗ ಯಾರೂ ನಿಮ್ಮ ನಾಡನ್ನು ಅಪಹರಿಸಲು ಅಪೇಕ್ಷಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು