Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:17 - ಕನ್ನಡ ಸತ್ಯವೇದವು C.L. Bible (BSI)

17 “ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಲ್ಲದೆ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:17
12 ತಿಳಿವುಗಳ ಹೋಲಿಕೆ  

ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.


ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.


ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು