Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:2 - ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ನನಗೋಸ್ಕರ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:2
16 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಗೋತ್ರಪ್ರಧಾನರಲ್ಲಿ ಕೆಲವರು ಜೆರುಸಲೇಮಿನಲ್ಲಿ ಸರ್ವೇಶ್ವರನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟುವುದಕ್ಕೆ ಕಾಣಿಕೆಗಳನ್ನು ಕೊಟ್ಟರು.


ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.


ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.


ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;


ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”


ಮೋಶೆಗೆ ಸರ್ವೇಶ್ವರ ಸ್ವಾಮಿ ಹೀಗೆಂದು ಹೇಳಿದರು:


ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು