Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:21 - ಕನ್ನಡ ಸತ್ಯವೇದವು C.L. Bible (BSI)

21 ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:21
13 ತಿಳಿವುಗಳ ಹೋಲಿಕೆ  

ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.


ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.


ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಮಂಜೂಷದ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇಡು.


ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.


ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು