Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:30 - ಕನ್ನಡ ಸತ್ಯವೇದವು C.L. Bible (BSI)

30 ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:30
20 ತಿಳಿವುಗಳ ಹೋಲಿಕೆ  

ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ಮೇಜು, ಅದರ ಉಪಕರಣಗಳು, ಕಾಣಿಕೆಯ ರೊಟ್ಟಿ ಇವುಗಳನ್ನೂ;


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;


ಕೇಹಾತ್ಯ ಗೋತ್ರದ ಮಿಕ್ಕ ಸದಸ್ಯರು ಪ್ರತೀ ಸಬ್ಬತ್ ದಿನ ದೇವಾಲಯದಲ್ಲಿ ಸಮರ್ಪಿಸಲಾಗುತ್ತಿದ್ದ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಜವಾಬ್ದಾರಿ ಹೊಂದಿದ್ದರು.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಸರ್ವೇಶ್ವರನ ಸನ್ನಿಧಿಯಿಂದ ತೆಗೆಯಲಾದ ನೈವೇದ್ಯದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲ. ಆದುದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


“ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.


ಮೇಜು, ಅದರ ಗದ್ದಿಗೆಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ಕಾಣಿಕೆಯ ರೊಟ್ಟಿಗಳು,


ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.


ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.


ಆ ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಪವಿತ್ರವಾದ ಮೀಸಲು ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿಮ್ಮ ಆಳುಗಳು ಸದ್ಯಕ್ಕೆ ಸಂಗಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು,” ಎಂದನು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.


ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು.


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು