Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರ ಮಧ್ಯದಲ್ಲಿ ವಾಸಿಸುವದಕ್ಕೆ ನನಗೆ ಒಂದು ದೇವಸ್ಥಾನವನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:8
25 ತಿಳಿವುಗಳ ಹೋಲಿಕೆ  

ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.


ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.


ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.


ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫನನ್ನು ಕರೆಸಿ, “ನೀವು ಇಲ್ಲಿಗೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಿ,” ಎಂದನು.


“ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು