Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:31 - ಕನ್ನಡ ಸತ್ಯವೇದವು C.L. Bible (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:31
30 ತಿಳಿವುಗಳ ಹೋಲಿಕೆ  

ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ಸೊಲೊಮೋನನು ಪರದೆಯನ್ನು ನೀಲಿ, ಊದಾ, ಕೆಂಪು ವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು.


ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಒಂದು ತೆರೆಯನ್ನು ಮಾಡಿದರು.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.


ಆಗ ಮಹಾದೇವಾಲಯದ ತೆರೆ ಮೇಲಿನಿಂದ ಕೆಳಗಿನವರೆಗೂ ಇಬ್ಭಾಗವಾಗಿ ಸೀಳಿಹೋಯಿತು.


ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ !


ಜೆರುಸಲೇಮ್, ನಾನು ನಿನ್ನ ಮರೆತಲ್ಲಿ I ನನ್ನ ಬಲಹಸ್ತ ಬತ್ತಿಹೋಗಿಬಿಡಲಿ II


ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.


ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.


ನಯವಾದ ನಾರುಬಟ್ಟೆಗಳು, ಆಡುಕೂದಲಿನ ಬಟ್ಟೆಗಳು,


“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,


ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು.


ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ, ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.


ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.


ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ,


ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು