Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:33 - ಕನ್ನಡ ಸತ್ಯವೇದವು C.L. Bible (BSI)

33 ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು, ಆ ತೆರೆಯು ಪವಿತ್ರಸ್ಥಾನವೆಂಬದನ್ನೂ ಮಹಾಪವಿತ್ರಸ್ಥಾನವೆಂಬದನ್ನೂ ಬೇರೆ ಬೇರೆ ಮಾಡುವದು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:33
16 ತಿಳಿವುಗಳ ಹೋಲಿಕೆ  

ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು.


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ, ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.


ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು.


ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ಇದಲ್ಲದೆ, ಅವನು ‘ಮಹಾಪರಿಶುದ್ಧ ಸ್ಥಳವನ್ನು’ ಮಾಡಿಸಿದನು.ಅದರ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್; ಅದರ ಅಗಲ ಒಂಬತ್ತು ಮೀಟರ್. ಅದನ್ನು ಸುಮಾರು 20 ಮೆಟ್ರಿಕ್ ಟನ್ ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.


ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು