Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:3 - ಕನ್ನಡ ಸತ್ಯವೇದವು C.L. Bible (BSI)

3 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:3
17 ತಿಳಿವುಗಳ ಹೋಲಿಕೆ  

ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.


ಹಂಡೆ, ಸಲಿಕೆ ಹಾಗೂ ಮುಳ್ಳು, ಹೀಗೆ ಹೂರಾಮಾಬೀಮನು ಅರಸ ಸೊಲೊಮೋನನ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ಕಂಚಿನಿಂದ ಮಾಡಿ ಮುಗಿಸಿದನು.


ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು:


ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ :-


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಠಿಕೆಗಳು, ಮುಳ್ಳುಗಳು, ಸಲಿಕೆಗಳು ಹಾಗೂ ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ಪೀಠದ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು.


ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಪೀಠಕ್ಕೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.


ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,


ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು