Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:18 - ಕನ್ನಡ ಸತ್ಯವೇದವು C.L. Bible (BSI)

18 ಎರಡನೆಯ ಸಾಲಿನಲ್ಲಿ ಕೆಂಪರಲು ಹಾಗು ನೀಲಿ ಪಚ್ಚೆಗಳನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲರತ್ನ ಮತ್ತು ವಜ್ರಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ, ಪಚ್ಚೆಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:18
13 ತಿಳಿವುಗಳ ಹೋಲಿಕೆ  

ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.


ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ.


ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳು,


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲುಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಹಾಗು ಸ್ಫಟಿಕಗಳನ್ನು;


ಮೂರನೆಯ ಸಾಲಿನಲ್ಲಿ ಸುವರ್ಣ ರತ್ನ, ಗೋಮೇಧಕ ಹಾಗು ಧೂಮ್ರಮಣಿಗಳನ್ನು; ಮತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು