Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:29 - ಕನ್ನಡ ಸತ್ಯವೇದವು C.L. Bible (BSI)

29 “ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೈವನಿರ್ಣಯದ ಪದಕದ ಮೇಲೆ ಇಸ್ರಾಯೇಲ್ಯರ ಕುಲಗಳ ಹೆಸರುಗಳು ಬರೆದಿರುವದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ನಿತ್ಯವಾಗಿ ಯೆಹೋವನ ನೆನಪಿಗೆ ತರುವದಕ್ಕಾಗಿ ತನ್ನ ಹೃದಯದ ಮೇಲೆ ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:29
8 ತಿಳಿವುಗಳ ಹೋಲಿಕೆ  

ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.


ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.


ಎದೆಫಲಕವು ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆ ಹಾಗು ಕವಚದಿಂದ ಕಳಚಿಬೀಳದಂತೆ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು