Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:3 - ಕನ್ನಡ ಸತ್ಯವೇದವು C.L. Bible (BSI)

3 ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:3
16 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.


ಮೋಶೆ ಇಸ್ರಯೇಲರಿಗೆ ಹೀಗೆಂದನು: “ಸರ್ವೇಶ್ವರ ಸ್ವಾಮಿ ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಹೆಸರಿಸಿ ಆಯ್ಕೆ ಮಾಡಿದ್ದಾರೆ. ನಯನವಿರಾದ ಕೆಲಸಗಳನ್ನು ನಿಯೋಜಿಸುವುದಕ್ಕೂ,


ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.


ಚಿನ್ನ, ಬೆಳ್ಳಿ, ತಾಮ್ರಗಳಿಂದ ಕೆಲಸ ನಡೆಸುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ವಿಚಿತ್ರ ಕೆತ್ತನೆ ಕೆಲಸ ಮಾಡುವುದಕ್ಕೂ


“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


“ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು