Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:4 - ಕನ್ನಡ ಸತ್ಯವೇದವು C.L. Bible (BSI)

4 ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:4
20 ತಿಳಿವುಗಳ ಹೋಲಿಕೆ  

ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.


ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ‘ಏಫೋದ’ನ್ನು ತಂದಿದ್ದನು.


ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ನಾರಿನಿಂದ ಮಹಾಯಾಜಕನ ಪೇಟವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಪೇಟಗಳನ್ನೂ


ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.


ಅವನ ತಲೆಗೆ ಪೇಟವನ್ನು ಹಾಕಿಸಿ ಪೇಟದ ಮೇಲೆ ಪವಿತ್ರ ಪಟ್ಟಿಯನ್ನು ಕಟ್ಟಿಸು;


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು