Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:6 - ಕನ್ನಡ ಸತ್ಯವೇದವು C.L. Bible (BSI)

6 ‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಫೋದೆಂಬ ಮಹಾಯಾಜಕ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸಿ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದವರ ಕೈಯಿಂದ ಅಲಂಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:6
11 ತಿಳಿವುಗಳ ಹೋಲಿಕೆ  

“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,


ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.


ಈ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳಿರಬೇಕು. ಅದಕ್ಕೆ ಎರಡು ಕೊನೆಗಳು ಜೋಡಿಸಲ್ಪಡಬೇಕು.


ತರುವಾಯ ಆರೋನನಿಗೆ ಆ ವಸ್ತ್ರಗಳನ್ನು ಅಂದರೆ, ನಿಲುವಂಗಿಯನ್ನು, ಕವಚದೊಳಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು, ಎಫೋದ್ ಕವಚವನ್ನು, ಎದೆಕವಚವನ್ನು ತೊಡಿಸಿ, ಕವಚದ ಕಸೂತಿ ನಡುಕಟ್ಟನ್ನು ಕಟ್ಟು.


ಆಮೇಲೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿಸಿ, ಅದರಿಂದ ಅವನ ಕವಚವನ್ನು ಕಟ್ಟಿ,


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ‘ಏಫೋದ’ನ್ನು ತಂದಿದ್ದನು.


ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು