Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:18 - ಕನ್ನಡ ಸತ್ಯವೇದವು C.L. Bible (BSI)

18 ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:18
23 ತಿಳಿವುಗಳ ಹೋಲಿಕೆ  

ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.


ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.


ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.


ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.


ಆಮೇಲೆ ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆಸಿ ಅವುಗಳನ್ನೂ ಆ ತುಂಡುಗಳನ್ನೂ ಹಾಗು ತಲೆಯನ್ನೂ ಒಟ್ಟಿಗೆ ಇಟ್ಟು


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು