Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:2 - ಕನ್ನಡ ಸತ್ಯವೇದವು C.L. Bible (BSI)

2 ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹೊಯಿದ ಹುಳಿಯಿಲ್ಲದ ಕಡುಬುಗಳನ್ನೂ ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:2
14 ತಿಳಿವುಗಳ ಹೋಲಿಕೆ  

ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.


ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.


ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನು ಬುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು ಹಾಗೂ ಹುಳಿಯಿಲ್ಲದ ಒಂದು ಕಡುಬನ್ನು ತೆಗೆದುಕೊಂಡು ನಾಜೀರ ವ್ರತಸ್ಥನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಇಡಬೇಕು; ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.


ಸರ್ವೇಶ್ವರನ ಸನ್ನಿಧಿಯಲ್ಲಿ ಬುಟ್ಟಿಯಲ್ಲಿಟ್ಟಿದ್ದ ಹುಳಿಯಿಲ್ಲದ ತಿಂಡಿಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ, ಬರಿ ಹಿಟ್ಟನ್ನಾಗಲಿ ಯಾರಾದರು ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರು ಸಮವಾಗಿ ಅನುಭವಿಸತಕ್ಕದ್ದು.


ಅದು ನೈವೇದ್ಯ ವಸ್ತುವಾದುದರಿಂದ ಅದರ ಮೇಲೆ ಎಣ್ಣೆ ಹೊಯ್ಯಬೇಕು; ಸಾಂಬ್ರಾಣಿ ಇಡಬೇಕು.


ಬಲತೊಡೆಯನ್ನು ಮತ್ತು ಸರ್ವೇಶ್ವರನಾದ ನನಗೆದುರಾಗಿ ಪುಟ್ಟಿಯಲ್ಲಿ ಇಟ್ಟಿರುವ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊ.


ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.


ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು.


ಬಲಿಪೀಠದ ಮೇಲೆ ಬೆಂಕಿ ಯಾವಾಗಲೂ ಉರಿಯುತ್ತಿರಬೇಕು, ಆರಿಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು