Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:24 - ಕನ್ನಡ ಸತ್ಯವೇದವು C.L. Bible (BSI)

24 ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:24
9 ತಿಳಿವುಗಳ ಹೋಲಿಕೆ  

ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.


ಇವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿಸಿದನು.


ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಮೋಶೆಯ ಆಜ್ಞಾನುಸಾರ ಅವನು ಅವುಗಳ ಎದೆಯ ಭಾಗಗಳನ್ನೂ ಬಲತೊಡೆಗಳನ್ನೂ ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು.


ಬಲತೊಡೆಯನ್ನು ಮತ್ತು ಸರ್ವೇಶ್ವರನಾದ ನನಗೆದುರಾಗಿ ಪುಟ್ಟಿಯಲ್ಲಿ ಇಟ್ಟಿರುವ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.


ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಿದ ನಂತರ ಅವರು ದೇವದರ್ಶನದ ಗುಡಾರದ ಪರಿಚರ್ಯೆಯನ್ನು ಮಾಡಲಿ.


ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು. ಆ ಸಿವುಡನ್ನು ನೈವೇದ್ಯವಾಗಿ ಆರತಿಯೆತ್ತುವ ದಿನದಂದೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು