Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:27 - ಕನ್ನಡ ಸತ್ಯವೇದವು C.L. Bible (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:27
14 ತಿಳಿವುಗಳ ಹೋಲಿಕೆ  

“ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು.


“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.


ಮೋಶೆಯ ಆಜ್ಞಾನುಸಾರ ಅವನು ಅವುಗಳ ಎದೆಯ ಭಾಗಗಳನ್ನೂ ಬಲತೊಡೆಗಳನ್ನೂ ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು.


ದಹನಬಲಿದಾನ, ಧಾನ್ಯನೈವೇದ್ಯ, ದೋಷಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿ, ಯಾಜಕ ಅಭ್ಯಂಜನ ಬಲಿ, ಶಾಂತಿಸಮಾಧಾನ ಬಲಿ ಎಂಬ ಇವುಗಳ ವಿಷಯದಲ್ಲಿ ಮೇಲೆ ಹೇಳಿದ್ದೇ ಬಲಿದಾನ ವಿಧಿಗಳು.


“ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ಕೂಡ ಕಾಣಿಕೆಯಾಗಿ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆರತಿ ಮಾಡಿಸು. ಅದು ನಿನಗೇ ಸಲ್ಲತಕ್ಕ ಪಾಲು.


ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು