Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:28 - ಕನ್ನಡ ಸತ್ಯವೇದವು C.L. Bible (BSI)

28 ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:28
18 ತಿಳಿವುಗಳ ಹೋಲಿಕೆ  

“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.


ಇವುಗಳಲ್ಲಿ ಐನೂರರಲ್ಲಿ ಒಂದರ ಮೇರೆಗೆ ಸರ್ವೇಶ್ವರನಿಗೋಸ್ಕರ ಕಪ್ಪವನ್ನು ತೆಗೆದುಕೊಳ್ಳಿ. ಇದನ್ನು ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿರಿ.


ನಿಮಗೆ ಕೊಡಲಾಗುವ ಸಕಲ ಪದಾರ್ಥಗಳಲ್ಲಿ ಉತ್ತಮ ಭಾಗವನ್ನೇ, ಅಂದರೆ ದೇವರ ವಸ್ತುವಾಗುವುದಕ್ಕೆ ಯೋಗ್ಯವಾದ ಭಾಗವನ್ನೇ ಸರ್ವೇಶ್ವರನಿಗೆ ಮೀಸಲಾಗಿಟ್ಟು ಸಮರ್ಪಿಸಬೇಕು.


ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”


“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.


“ಆರೋನನ ಯಾಜಕ ದೀಕ್ಷಾವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗುವಂತೆ ಇಡಬೇಕು. ಅವರೂ ಯಾಜಕಾಭಿಷಿಕ್ತರಾಗಿ ಮಹಾಯಾಜಕ ಸೇವೆಯನ್ನು ಕೈಗೊಂಡಾಗ ಅವುಗಳನ್ನು ಧರಿಸಿಕೊಳ್ಳಬೇಕು,


ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.


ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.


ಒಬ್ಬನು ಸರ್ವೇಶ್ವರನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದೊಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.


ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.


ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.


ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.


ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು