Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:30 - ಕನ್ನಡ ಸತ್ಯವೇದವು C.L. Bible (BSI)

30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ತೊಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆರೋನನ ತರುವಾಯ ಅವನ ಮಗನು ಮಹಾಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:30
17 ತಿಳಿವುಗಳ ಹೋಲಿಕೆ  

ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಹೀಗೆ ಏಳು ದಿವಸ ಬಲಿಪೀಠದ ದೋಷವನ್ನು ಪರಿಹರಿಸುತ್ತಾ, ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.


ಅಂತೆಯೇ ಆರೋನನು ಬಲಿಪೀಠದ ಹತ್ತಿರಕ್ಕೆ ಹೋಗಿ ತನಗಾಗಿ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ವಧಿಸಿದನು.


ಎಂಟನೆಯ ದಿನ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹಾಗು ಇಸ್ರಯೇಲರ ಹಿರಿಯರನ್ನೂ ಕರೆಸಿದನು.


ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚರಣೆಯನ್ನು ನಡೆಸಿ ಆರೋನ ಮತ್ತು ಅವನ ಮಕ್ಕಳನ್ನು ಯಾಜಕ ಸೇವೆಗೆ ಅಭಿಷೇಕಿಸು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಮತ್ತೆ ಏಳುದಿನಗಳಾದ ಮೇಲೆ ಇನ್ನೊಮ್ಮೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಈ ಸಾರಿ ಅದು ಹಿಂತಿರುಗಿ ಬರಲೇ ಇಲ್ಲ.


ಇನ್ನೂ ಏಳು ದಿವಸ ಕಾದು, ಪಾರಿವಾಳವನ್ನು ಹೊರಕ್ಕೆಬಿಟ್ಟನು.


“ಆರೋನನ ಯಾಜಕ ದೀಕ್ಷಾವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗುವಂತೆ ಇಡಬೇಕು. ಅವರೂ ಯಾಜಕಾಭಿಷಿಕ್ತರಾಗಿ ಮಹಾಯಾಜಕ ಸೇವೆಯನ್ನು ಕೈಗೊಂಡಾಗ ಅವುಗಳನ್ನು ಧರಿಸಿಕೊಳ್ಳಬೇಕು,


ಆರೋನನ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.


ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು