Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:1 - ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:1
33 ತಿಳಿವುಗಳ ಹೋಲಿಕೆ  

ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.


ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು.


ಹೋರೇಬಿನಲಿ ಮಾಡಿದರು ಬಸವನನು I ಆರಾಧಿಸಿದರು ಆ ಎರಕದ ಶಿಲೆಯನು II


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


“ಹೋರೇಬಿನಲ್ಲಿ ನಮ್ಮ ದೇವರಾದ ಸರ್ವೇಶ್ವರ ನಮಗೆ, ‘ನೀವು ಈ ಬೆಟ್ಟದ ಬಳಿ ವಾಸಿಸಿದ್ದು ಸಾಕು;


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು:


ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ಹುಡುಗಿಯರು ತಮ್ಮ ತಂದೆ ರೆಗೂವೇಲನ ಬಳಿಗೆ ಹಿಂದಿರುಗಿದಾಗ ಅವನು, “ಈ ಹೊತ್ತು ಬಲುಬೇಗ ಬಂದು ಇದ್ದೀರಿ, ಏನು ಕಾರಣ?” ಎಂದು ವಿಚಾರಿಸಿದನು.


“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.


ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.


(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)


ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.


ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು