Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:11 - ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:11
13 ತಿಳಿವುಗಳ ಹೋಲಿಕೆ  

ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.


ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು