Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:13 - ಕನ್ನಡ ಸತ್ಯವೇದವು C.L. Bible (BSI)

13 ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:13
16 ತಿಳಿವುಗಳ ಹೋಲಿಕೆ  

ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಆದುದರಿಂದ ಅವನು ಆ ದೂತನನ್ನು, “ನೀವು ಹೇಳಿದ್ದು ನೆರವೇರಿದಾಗ ನಿಮ್ಮನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿಮ್ಮ ಹೆಸರೇನು?” ಎಂದು ಕೇಳಿದನು.


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು