Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:9 - ಕನ್ನಡ ಸತ್ಯವೇದವು C.L. Bible (BSI)

9 ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:9
22 ತಿಳಿವುಗಳ ಹೋಲಿಕೆ  

ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.


ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು