Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:10 - ಕನ್ನಡ ಸತ್ಯವೇದವು C.L. Bible (BSI)

10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:10
18 ತಿಳಿವುಗಳ ಹೋಲಿಕೆ  

ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು.


ಆ ವೇದಿಕೆಯ ಮೇಲೆ ಬೇರೆ ಯಾವ ಅಪವಿತ್ರ ಧೂಪವನ್ನೂ ಹಾಕಕೂಡದು. ಅದರ ಮೇಲೆ ದಹನಬಲಿಯನ್ನಾಗಲಿ, ಅನ್ನಪಾನ ದ್ರವ್ಯಗಳನ್ನಾಗಲಿ ಅರ್ಪಿಸಕೂಡದು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.


ಅದೋನೀಯನು ಸೊಲೊಮೋನನಿಗೆ ಹೆದರಿ, ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.


ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು