Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:20 - ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು; ತೊಳೆಯದೆ ಹೋದರೆ ಸತ್ತಾರು. ಹಾಗೆಯೇ ಅವರು ದೇವರ ಸೇವೆಯನ್ನು ನಡಿಸುವವರಾಗಿ ಯೆಹೋವನಿಗೆ ಹೋಮಸಮರ್ಪಣೆಗಾಗಿ ಯಜ್ಞವೇದಿಯ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:20
14 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.


ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.


ಆರೋನನು ಮತ್ತು ಅವನ ಮಕ್ಕಳು ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.


ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ.


ಬಳಿಕ ಮೋಶೆ ಆರೋನನನ್ನೂ ಅವನ ಪುತ್ರರನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನ ಮಾಡಿಸಿದನು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು